.

.

.

ಉದ್ಯೋಗ ಸುದ್ದಿಗಳು

‎ ‎‎ ‎‎ ‎ ‎‎ ‎‎ ‎‎‎ ‎‎ ‎‎‎ ‎‎ ‎‎‎

ಕರ್ನಾಟಕದಲ್ಲಿ ನಡೆಯುವ ಇನ್ನೂ ಹೆಚ್ಚಿನ ಉದ್ಯೋಗ ಸುದ್ದಿಗಳಿಗಾಗಿ, ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿರಿ: www.karemp.com .

‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎

‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ 

‎‎‎ ‎‎‎ ‎‎ ‎‎‎‎‎‎‎‎‎‎‎‎

ಕಾರವಾರ ಜಿಲ್ಲಾ ಗೃಹರಕ್ಷಕದಳ ನೇಮಕಾತಿ

ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ 89 ಸ್ವಯಂ ಸೇವಕ ಗೃಹರಕ್ಷಕ, ಗೃಹರಕ್ಷಕಿಯರ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿರಬೇಕು,ಕನಿಷ್ಠ ಪುರುಷ 168 ಸೆ.ಮೀ, ಮಹಿಳೆ 157 ಸೆ.ಮೀ ಎತ್ತರವಿರಬೇಕು, ಅರ್ಜಿ ಸಲ್ಲಿಕೆಗೆ 10 ಮಾರ್ಚ್‌ 2026 ಕೊನೆಯ ದಿನವಾಗಿದೆ. ಕಾರವಾರದ ಕೋಡಿಬಾಗದಲ್ಲಿರುವ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಕಚೇರಿಯಿಂದ ಅರ್ಜಿ ಪಡೆದುಕೊಂಡ, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿ (08382-200137 ಅಥವಾ 9880573509) ಸಂಪರ್ಕಿಸ ಬಹುದು ಎಂದು ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೂಚನೆ:- ಗೃಹರಕ್ಷಕ ದಳ ಸಂಸ್ಥೆಯು ಸ್ವಯಂ ಸೇವಕ ಸಂಸ್ಥೆಯಾಗಿದ್ದು, ಇದು ಖಾಯಂ ನೌಕರಿಯಾಗಿರುವುದಿಲ್ಲ ಗೌರವ ಧನ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎ ‎‎‎ ‎‎ ‎‎‎‎‎‎‎‎‎‎‎‎

ಹೆಸ್ಕಾಂ ನೇಮಕಾತಿ

388 ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 338 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಐಟಿಐ ಇಲೆಕ್ಟ್ರೀಷಿಯನ್ ಪಾಸಾಗಿರಬೇಕು, ಗರಿಷ್ಠ 25 ವರ್ಷ ವಯೋಮತಿ ನಿಗದಿಪಡಿಸಲಾಗಿದೆ(ಎಸ್‌ಸಿ/ಎಸ್‌ಟಿ ಆಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ), ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 09 ಮಾರ್ಚ್ 2026 ರ ಒಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್-ಸೈಟ್ https://hescom.karnataka.gov.in ಬೇಟಿನೀಡಿರಿ. ಸೂಚನೆ ಈ ನೇಮಕಾತಿಯು ಖಾಯಂ ನೇಮಕಾತಿಯಾಗಿರುವುದಿಲ್ಲ, ಅಪ್ರೆಂಟಿಸ್ ನೇಮಕಾತಿಯು ತರಬೇತಿಯಾಗಿದ್ದು ತರಬೇತಿಮುಗಿಯುವವರೆಗೆ ಸಂಬಾವನೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎ ‎‎‎ ‎‎‎ ‎‎ ‎‎‎‎‎‎‎‎‎‎‎‎

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಉಚಿತ ಪೊಲೀಸ್ ಕೋಚಿಂಗ್ ನೀಡಲು ಅರ್ಜಿ ಆಹ್ವಾನ

ಕರ್ನಾಟಕ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯಿಂದ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ವಸತಿ ಸಹಿತ ಪೊಲೀಸ್ ಸಬ್-ಇನ್ಸೆಕ್ಟರ್(PSI) ಆಯ್ಕೆ ಪೂರ್ವ ತರಬೇತಿಯನ್ನು 75 ದಿನಗಳ ಅವಧಿಗೆ ಉಚಿತ ಊಟ ಮತ್ತು ವಸತಿಯೊಂದಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಪದವಿ ವಿದ್ಯಾರ್ಹತೆ ಹೊಂದಿರಬೇಕು, 20 ರಿಂದ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಪದವಿಯಲ್ಲಿ ಗಳಿಸಿರುವ ಅಂಕಗಳ ಆಧಾರದಮೇಲೆ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bcwd.karnataka.gov.in ಪ್ರವೇಶಿಸಿ ಆನ್‌ಲೈನ್ ಮೂಲಕ ದಿನಾಂಕ 13 ಫೆಬ್ರವರಿ 2026ರ ಒಳಗೆ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://bcwd.karnataka.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎‎ ‎‎ ‎‎‎ ‎‎‎ ‎‎ ‎‎‎‎‎‎‎‎‎‎‎‎

ಬೆಸ್ಕಾಂ ನೇಮಕಾತಿ

520 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆಸ್ಕಾಂ) ಒಟ್ಟು 520 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 315 ಪದವಿಧರ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಿ.ಎ/ಬಿ.ಎಸ್ಸಿ/ಬಿಕಾಂ/ಬಿಬಿಎ/ಬಿಸಿಎ/ಬಿಬಿಎಮ್/ಬಿ.ಇ/ಬಿ.ಟೆಕ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. 130 ಇಂಜಿನಿಯರಿಂಗ್ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಿ.ಇ/ಬಿಟೆಕ್(E&Eಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು. 75 ಡಿಪ್ಲೋಮಾ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು, ನೇಮಕಾತಿ ಪರೀಕ್ಷೆಯ ಅಂಕ, ದಾಖಲೆಗಳ ಪರಿಶೀಲನೆ ನಡೆಸಿ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 02 ಮಾರ್ಚ್ 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಗ ಅಧಿಕೃತ ವೆಬ್-ಸೈಟ್ https://bescom.karnataka.gov.in ಬೇಟಿನೀಡಿರಿ. (ಸೂಚನೆ : ಈ ನೇಮಕಾತಿಯು ಖಾಯಂ ನೇಮಕಾತಿಯಾಗಿರುವುದಿಲ್ಲ, ಒಂದು ವರ್ಷದ ತರಬೇತಿಯಾಗಿದ್ದು ತರಬೇತಿ ಮುಗಿಯುವ ವರೆಗೆ ಸಂಭಾವನೆ ನೀಡಲಾಗುವುದು).

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎‎ ‎‎ ‎‎‎‎‎‎‎‎‎‎‎‎

ಮೆಸ್ಕಾಂ ನೇಮಕಾತಿ

200 ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ 65 ಜನರಲ್ ಸ್ಟ್ರೀಮ್ ಪದವೀಧರ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಬಿ.ಎ. / ಬಿ.ಎಸ್ಸಿ. / ಬಿ.ಕಾಂ. / ಬಿ.ಬಿ.ಎ. / ಬಿ.ಸಿ.ಎ ವಿದ್ಯಾರ್ಹತೆ ಹೊಂದಿರಬೇಕು, 70 ಪದವೀಧರ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪಾಸಾಗಿರಬೇಕು, 65 ಟೆಕ್ನಿಕಲ್ ಡಿಪ್ಲೊಮಾ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಡಿಪ್ಲೊಮಾ ತೇರ್ಗಡೆಯಾಗಿರಬೇಕು, ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದಮೇಲೆ ಆಯ್ಕೆಪಟ್ಟಿ ತಯಾರಿಸಿ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 02 ಮಾರ್ಚ್ 2026ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್-ಸೈಟ್ https://nats.education.gov.in ಅಥವಾ https://mescom.karnataka.gov.in ಬೇಟಿನೀಡಿರಿ. ಸೂಚನೆ ಈ ನೇಮಕಾತಿಯು ಖಾಯಂ ನೇಮಕಾತಿಯಾಗಿರುವುದಿಲ್ಲ, ಅಪ್ರೆಂಟಿಸ್ ನೇಮಕಾತಿಯು ತರಬೇತಿಯಾಗಿದ್ದು ತರಬೇತಿಮುಗಿಯುವವರೆಗೆ ಸಂಬಾವನೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎ ‎‎‎ ‎‎‎ ‎‎ ‎‎‎‎‎‎‎‎‎‎‎‎

ಆರೋಗ್ಯ ಇಲಾಖೆ ನೇಮಕಾತಿ

ಜಿಲ್ಲಾ ಆರೋಗ್ಯ ಕು. ಕ ಸಂಘ ನೇಮಕಾತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಶುಶ್ರೂಷಣಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ, ಶುಶ್ರೂಷಣಾಧಿಕಾರಿ 55 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ |ಜಿಎನ್‌ಎಂ | ಬಿಎಸ್‌ಸಿ ವಿದ್ಯಾರ್ಹತೆ ಹಾಗೂ ಕೆಎನ್ಸಿ ನೋಂದಣಿ ಹೊಂದಿ | ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು. | (ಮಹಿಳಾ ಅಭ್ಯರ್ಥಿಗಳು ಮಾತ್ರ), ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಆಸಕ್ತ ಅರ್ಹ ಅಭ್ಯರ್ಥಿಗಳು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ:27-01-2026, 02-02-2026, 09-02-2026, 16-02-2026, 23-02-2026, 02-03-2026, 09-03-2026, 16-03-2026 ದಿನಾಂಕಗಳಂದು ತಮ್ಮ ಮೂಲ ದಾಖಲೆಗಳೊಂದಿಗೆ ಹಾಗೂ ನಕಲು ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಂಗಳೂರು ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎ ‎‎ ‎‎‎ ‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎ ‎‎ ‎‎‎‎‎‎‎‎‎‎‎‎

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ

ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಅಪ್ರೆಂಟಿಸ್ ನೇಮಕಾತಿ

ಬ್ಯಾಂಕ್ ಆಫ್ ಮಹಾರಾಷ್ಟ್ರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸೇರಿದಂತೆ ದೇಶಾದ್ಯಂತ ಒಟ್ಟು 600 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಯಾವುದೇ ಪದವಿ ಪಡೆದಿರಬೇಕು, ಸಾಮಾನ್ಯ ವರ್ಗ 20 ರಿಂದ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ(ಮೀಸಲಾತಿಗನುಗುಣವಾಗಿ ಸಡಿಲಿಕೆ ನೀಡಲಾಗುವುದು), ಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://bankofmaharashtra.bank.in ಪ್ರವೇಶಿಸಿ ದಿನಾಂಕ 25 ಜನವರಿ 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಬೇಟಿನೀಡಿರಿ. (ಸೂಚನೆ:- ಈ ನೇಮಕಾತಿಯು ಖಾಯಂ ನೇಮಕಾತಿಯಾಗಿರುವುದಿಲ್ಲ ಅಪ್ರೆಂಟಿಸ್ ನೇಮಕಾತಿಯು ತರಬೇತಿಯಾಗಿದ್ದು ತರಬೇತಿ ಮುಗಿಯುವವರೆಗೆ ₹ 12300 ಪ್ರತಿ ತಿಂಗಳು ಸಂಭಾವನೆ ನೀಡಲಾಗುವುದು).

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎ ‎‎ ‎‎‎ ‎‎ ‎‎‎‎‎‎‎‎‎‎‎‎

ಕೆಇಎ ನೇಮಕಾತಿ

ಸ್ಪರ್ಧಾತ್ಮಕ ಪರೀಕ್ಷೆಯ ಅಧಿಕೃತ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 2025 ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು 10, 11 ಜನವರಿ 2026ರಂದು ನಡೆಸಲಾಗಿತ್ತು ಇದೀಗ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಕೃತ ಕೀ ಉತ್ತರ ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ವೆಬ್‌ಸೈಟ್ ಪ್ರವೇಶಿಸಿ ಕೀ ಉತ್ತರ ಪರೀಕ್ಷಿಸಿಕೊಳ್ಳಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ https://cetonline.karnataka.gov.in/kea ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎

ಕರ್ನಾಟಕ ಲೋಕಸೇವಾ ಆಯೋಗ

ಕೆಪಿಎಸ್‌ಸಿ ಕಿರಿಯ ಲೆಕ್ಕ ಸಹಾಯಕರು ನೇಮಕಾತಿ ಹೆಚ್ಚುವರಿ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 67 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳನ್ನು ಭರ್ತಿಮಾಡಲು ಮಾರ್ಚ್ 2023ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 2023ರಲ್ಲಿ ನಡೆಸಿ ಜೂನ್ 2025ರಲ್ಲಿ ಅಂತಿಮ ನೇಮಕಾತಿಪಟ್ಟಿಯನ್ನು ಪ್ರಕಟಿಸಲಾಗಿತ್ತು ಇದೀಗ ಉಳಿಕೆ ಮೂಲ ವೃಂದದ 60 ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಆಯೋಗವು ಪ್ರಕಟಿಸಿದೆ, ಈ ನೇಮಕಾತಿ ಪಟ್ಟಿಯು ಆಯ್ಕೆಪಟ್ಟಿಯಾಗಿರುವುದಿಲ್ಲ ಹೆಚ್ಚುವರಿಪಟ್ಟಿಯಾಗಿರುತ್ತದೆ, ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ಹೆಚ್ಚುವರಿ ಪಟ್ಟಿಯ ಮಾಹಿತಿಯನ್ನು ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ www.kpsc.kar.nic.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ

ಗ್ರಾಮ ಒನ್ ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದ್ದು, ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಸ್ವಂತ ಗ್ರಾಮದಲ್ಲಿ ತಲುಪಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ, ಪ್ರಸ್ತುತ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕಲಬುರಗಿ, ಕೊಡಗು, ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಡಿಪ್ಲೊಮಾ/ಐಟಿಐ/ಪಿಯುಸಿ II/ಪದವೀಧರರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕನ್ನಡ, ಇಂಗ್ಲಿಷ್ ಎರಡರಲ್ಲೂ ಟೈಪಿಂಗ್ ಮಾಡಲು ಪರಿಣತಿ ಹೊಂದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ದಿನಾಂಕ 15 ಜನವರಿ 2026ರ ಒಳಗೆ ಅರ್ಜಿ ಸಲ್ಲಿಸಬೇಕು, ಜಿಲ್ಲೆಯ ಯಾವ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಯಲು ವೆಬ್‌ಸೈಟ್ https://kal-mys.gramaone.karnataka.gov.in ಭೇಟಿನೀಡಿ ಜಿಲ್ಲೆ-ತಾಲೂಕು-ಗ್ರಾಮ ಆಯ್ಕೆ ಮಾಡಿ ಮಾಹಿತಿ ತಿಳಿಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kal-mys.gramaone.karnataka.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎

ವಾಕರಸಾಸಂ ನೇಮಕಾತಿ

2000 ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿ ಪ್ರಕಟ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಚಾಲಕ 2500 ಹುದ್ದೆಗಳು + 55(ಪಜಾ-ಹಿಂಬಾಕಿ) ಹುದ್ದೆಗಳು ಮತ್ತು 259-ಚಾಲಕ ಕಂ-ನಿರ್ವಾಹಕ (ಪಜಾ-ಹಿಂಬಾಕಿ) ಹುದ್ದೆಗಳು ಸೇರಿದಂತೆ ಒಟ್ಟು 2814 ಹುದ್ದೆಗಳಿಗೆ ಡಿಸೆಂಬರ್ 2019ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಮತ್ತು ಅರ್ಹ ಅಭ್ಯರ್ಥಿಗಳಿಗೆ ದೈಹಿಕ ಪರೀಶೀಲನೆ ಮತ್ತು ಚಾಲನಾ ವೃತ್ತಿ ಪರೀಕ್ಷೆಯನ್ನು ಈ ಹಿಂದೆ ನಡೆಸಲಾಗಿತ್ತು ಇದೀಗ ಸರ್ಕಾರ ಅನುಮೊದನೆ ನೀಡಿರುವ 1686 ಚಾಲಕ ಹುದ್ದೆಗಳು +55-ಚಾಲಕ (ಪಜಾ-ಹಿಂಬಾಕಿ) ಹುದ್ದೆಗಳು ಮತ್ತು 259-ಚಾಲಕ ಕಂ-ನಿರ್ವಾಹಕ(ಪಜಾ-ಹಿಂಬಾಕಿ) ಹುದ್ದೆಗಳು ಸೇರಿದಂತೆ ಒಟ್ಟು 2000 ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸಾರಿಗೆ ಸಂಸ್ಥೆ ಪ್ರಕಟಿಸಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ಆಯ್ಕೆಪಟ್ಟಿಯನ್ನು ನೋಡಬಹುದಾಗಿದೆ, ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 02 ಜನವರಿ 2026ರ ಒಳಗೆ ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://nwkrtc.karnataka.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ 

ರೈಲ್ವೆ ನೇಮಕಾತಿ ಮಂಡಳಿ

22000 ರೈಲ್ವೆ ‘ಡಿ’ ಗ್ರೂಪ್ ಹುದ್ದೆಗಳ ನೇಮಕಾತಿ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 22000 ‘ಡಿ’ ಗ್ರೂಪ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸುವುದರ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಿದೆ, ಬೆಂಗಳೂರು ರೈಲ್ವೆ ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 22000 ರೈಲ್ವೆ ‘ಡಿ’ ಗ್ರೂಪ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ, ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾಗಿರಬೇಕು ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು, 18 ರಿಂದ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು, ಅರ್ಜಿಯನ್ನು ದಿನಾಂಕ 21 ಜನವರಿ 2026 ರಿಂದ 20 ಫೆಬ್ರವರಿ 2026ರ ವರೆಗೆ ಸಲ್ಲಿಸಬಹುದಾಗಿದೆ, ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ ಇತರ ಸಂಪೂರ್ಣ ವಿವರಣೆ ಒಳಗೊಂಡಿರುವ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.rrbbnc.gov.in ಭೇಟಿನೀಡಿರಿ ಅಥವಾ ನಮ್ಮ ಆಪ್ ಸಂಪರ್ಕದಲ್ಲಿರಿ.

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕೆಪಿಎಸ್‌ಸಿ ನೇಮಕಾತಿ

ಪಿಡಿಒ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೈದರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳ ಭರ್ತಿಮಾಡಲು ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್ 2024ರಲ್ಲಿ ನಡೆಸಲಾಗಿತ್ತು ಇದೀಗ ಈ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.kpsc.kar.nic.in ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ತಾತ್ಕಾಲಿಕ ನೇಮಕಾತಿ ಅಭ್ಯರ್ಥಿಗಳ ಪಟ್ಟಿ ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎

ಆರೋಗ್ಯ ಇಲಾಖೆ ನೇಮಕಾತಿ

126 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಕು.ಕ.ಸಂಘ, ಬೆಂಗಳೂರು ನಗರ ಜಿಲ್ಲೆ ಎನ್ ಹೆಚ್ ಎಂ ಯೋಜನೆಯಡಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ, 103 ಮಹಿಳಾ ಶ್ರುಶ್ರೂಷಣಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಬಿ.ಎಸ್.ಸಿ / ಜೆ ಎನ್ ಎಂ ಹಾಗೂ ಕೆ ಎನ್ ಸಿ ನೋಂದಣಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಇತರೆ ಹುದ್ದೆಗಳಾದ 05 ಮಕ್ಕಳ ತಜ್ಞ ವ್ಯದ್ಯರು ಹುದ್ದೆಗಳು, 16 ವೈದ್ಯಾಧಿಕಾರಿಗಳು ಹುದ್ದೆಗಳು, 02 ಮಕ್ಕಳ ಆರೋಗ್ಯ ಸಮಾಲೋಚಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಯಾ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರಬೇಕು(ಎಂ.ಬಿ.ಬಿ.ಎಸ್/ಸ್ನಾತಕ ಪದವಿ/ಡಿಎಂ/ಎಂಡಿ). ಶ್ರುಶ್ರೂಷಣಾಧಿಕಾರಿಗಳು ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯೋಮಿತಿ, ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗರಿಷ್ಠ 60 ವರ್ಷ ವಯೋಮಿತಿ ಮತ್ತು ಮಕ್ಕಳ ಆರೋಗ್ಯ ಸಮಾಲೋಚಕರು ಹುದ್ದೆಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಆಸಕ್ತ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ 2ನೇ ಮತ್ತು 4ನೇ ಸೋಮವಾರ ಹಾಜರಾಗಬಹುದಾಗಿದೆ, ಈ ನೇಮಕಾತಿಯು ರೋಲಿಂಗ್ ನೇಮಕಾತಿಯಾಗಿರುವುದರಿಂದ 31 ಮಾರ್ಚ್ 2026ರ ವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಹೆಚ್.ಸಿ.ಹೆಚ್ ಕಚೇರಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು-38 ಸಂಪರ್ಕಿಸಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿ

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 2025ರಲ್ಲಿ ಅರ್ಜಿ ಆಹ್ವಾನಿಸಿ, ಇತ್ತಿಚೆಗೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ದಲ್ಲಿ ಖಾಲಿ 44 ಇರುವ ಹುದ್ದೆಗಳು ಮತ್ತು ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 229 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಎಲ್ಲಾ ಹುದ್ದೆಗಳಿಗೂ ಅರ್ಜಿ ಸಲ್ಲಿಸಲು 25 ನವೆಂಬರ್ 2025ರ ವರೆಗೆ ಅವಕಾಶ ನೀಡಲಾಗಿದೆ ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ, ದಿನಾಂಕ 20 ಡಿಸೆಂಬರ್ 2025 ರಿಂದ 22 ಫೆಬ್ರವರಿ 2026 ರವರೆಗೆ ನಡೆಸಲು ನಿಗದಿಪಡಿಸಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ, ಅಭ್ಯರ್ಥಿಗಳು ಹುದ್ದೆ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ರೈಲ್ವೆ ಗ್ರೂಪ್ ‘ಡಿ’ ನೇಮಕಾತಿ

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ

ಭಾರತೀಯ ರೈಲ್ವೆ ಮಂಡಳಿ, ಬೆಂಗಳೂರು ರೈಲ್ವೆ ಸೇರಿದಂತೆ ದೇಶಾದ್ಯಂತ ಒಟ್ಟು 32438 ಗ್ರೂಪ್ ‘ಡಿ’ ಹುದ್ದೆಗಳ ನೇಮಕಾತಿಗೆ ಜನವರಿ 2025 ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕದ ಕುರಿತು ಅಧಿಕೃತ ಪ್ರಕಟಣೆಯನ್ನು ಪ್ರಕಟಿಸಿದೆ, ದಿನಾಂಕ 27 ನವೆಂಬರ್ 2025 ರಿಂದ 16 ಜನವರಿ 2026ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ರೈಲ್ವೆ ಮಂಡಳಿ ದಿನಾಂಕ ನಿಗದಿಪಡಿಸಿದೆ. ಅಭ್ಯರ್ಥಿಗಳಿಗೆ ಯಾವ ದಿನಾಂಕದಂದು ಪರೀಕ್ಷೆ ನಡೆಸಲಾಗುತ್ತದೆ ಎಂಬುದರ ಕುರಿತು ಮಾಹಿತಿಯನ್ನು ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಗೆ SMS/Email ಗೆ ಮಾಹಿತಿ ಕಳುಹಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://rrbbnc.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ಆಹಾರ ಇಲಾಖೆ ನೇಮಕಾತಿ

ವಿವಿಧ ಹುದ್ದೆಗಳ 1:3 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಹಿರಿಯ ಸಹಾಯಕರು, ಹಿರಿಯ ಸಹಾಯಕರು (ಲೆಕ್ಕ) ಹಾಗೂ ಗುಣಮಟ್ಟ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಜೂನ್ 2023ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್ 2023ರಲ್ಲಿ ನಡೆಸಲಾಗಿತ್ತು ಇದೀಗ 1:3 ಅಂತಿಮ ಪಟ್ಟಿಯನ್ನು ನಿಗಮದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, 1:3 ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು ದಿನಾಂಕ 27 ಮತ್ತು 28 ನವೆಂಬರ್ 2025 ರಂದು ನಡೆಸಲಿದ್ದು, ಸ್ಥಳ, ದಿನಾಂಕ ಹಾಗೂ ಸಮಯದ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kfcsc.karnataka.gov.in ನಲ್ಲಿ ಪ್ರಕಟಿಸಲಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kfcsc.karnataka.gov.i ಭೇಟಿನೀಡಿರಿ.
.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಎಸ್‌ಎಸ್‌ಸಿ ನೇಮಕಾತಿ

39481 ಹುದ್ದೆಗಳ ಕಾನ್ಸ್‌ಟೇಬಲ್ ಪರೀಕ್ಷೆ ಫಲಿತಾಂಶ ಪ್ರಕಟ

ಸಿಬ್ಬಂದಿ ನೇಮಕಾತಿ ಸಂಸ್ಥೆಯು(ಎಸ್‌ಎಸ್‌ಸಿ) ಕರ್ನಾಟಕ ಸೇರಿದಂತೆ ದೇಶಾದ್ಯಂತ ಖಾಲಿ ಇರುವ 39481 ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 2024ರಲ್ಲಿ ಅರ್ಜಿ ಆಹ್ಚಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಆಗಸ್ಟ್/ಸೆಪ್ಟೆಂಬರ್ 2025 ರಲ್ಲಿ ದೈಹಿಕ ಪರೀಕ್ಷೆಯನ್ನು ನಡೆಸಲಾಗಿತ್ತು ಇದೀಗ ನೇಮಕಾತಿಯ ಮುಂದಿನ ಹಂತವಾದ ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಅರ್ಹರಾದ 1,26,736 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಮಾಡಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://ssc.gov.in ಪ್ರವೇಶಿಸಿ ಆಯ್ಕೆಪಟ್ಟಿಯನ್ನು ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ https://ssc.gov.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ಅರಣ್ಯ ಇಲಾಖೆ

540 ಫಾರೆಸ್ಟ್ ಗಾರ್ಡ್ ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಗಸ್ತು ಅರಣ್ಯ ಪಾಲಕ ಹುದ್ದೆಗಳ(Beat Foresters /Forest Guards) ನೇಮಕಾತಿಗೆ ಡಿಸೆಂಬರ್ 2023ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆ ನಡೆಸಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಜುಲೈ 2025ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು ಇದೀಗ 1:1 ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಇಲಾಖೆಯು ಬಿಡುಗಡೆಗೊಳಿಸಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ಆಯ್ಕೆ ಪಟ್ಟಿಯನ್ನು ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅರಣ್ಯ ಇಲಾಖೆ ಅಧಿಕೃತ ವೆಬ್-ಸೈಟ್ https://aranya.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ಸರ್ಕಾರಿ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ

ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ಒಂದು ಪ್ರಮುಖ ಆದೇಶ ಹೊರಡಿಸಿದೆ. ನೇರ ನೇಮಕಾತಿಗಾಗಿ ನಿಗದಿಪಡಿಸಿದ್ದ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಕಾಲ ಸಡಿಲಗೊಳಿಸಿದೆ. ಈ ಆದೇಶವು 2027ರ ಡಿಸೆಂಬರ್ 31ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸುವ ಎಲ್ಲಾ ಹುದ್ದೆಗಳಿಗೂ ಅನ್ವಯವಾಗಲಿದೆ. ಸರ್ಕಾರಿ ಉದ್ಯೋಗವನ್ನು ಬಯಸುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಅವರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸರ್ಕಾರವು ಮನವಿ ಮಾಡಿದೆ. ಈ ಹಿಂದೆ 2 ವರ್ಷ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ನೀಡಲಾಗಿತ್ತು ಆದರೆ ಅಭ್ಯರ್ಥಿಗಳು ಹೆಚ್ಚಿನ ಸಡಿಲಿಕೆ ಬೇಡಿಕೆ ನೀಡಿದ್ದರಿಂದ ಪ್ರಸ್ತುತ ಒಂದು ಬಾರಿಗೇ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ ಆದೇಶಿಸಲಾಗಿರುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಸೇವಾ ನಿಯಮಗಳು) ಇಲಾಖೆ ಆದೇಶ ಹೊರಡಿಸಿದೆ.

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕೆಪಿಸಿಎಲ್ ನೇಮಕಾತಿ

ನೇಮಕಾತಿ ಮರು ಪರೀಕ್ಷೆಗೆ ಆದೇಶ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಸಿಎಲ್) ದಲ್ಲಿ ಖಾಲಿ ಇದ್ದ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಆಗಸ್ಟ್ 2017ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು 2024ರ ಫೆಬ್ರುವರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿ ಆಯ್ಕೆಪಟ್ಟಿಯನ್ನು ಬಿಡುಗಡೆಮಾಡಲಾಗಿತ್ತು, ನೇಮಕಾತಿ ಅಧಿಸೂಚನೆಯಲ್ಲಿ ಇಲ್ಲದಿದ್ದರೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆಯಲ್ಲಿ ಋಣಾತ್ಮಕ ಅಂಕ ಪದ್ಧತಿ ಅನುಸರಿಸಿದ್ದನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆಹೋಗಿದ್ದರು ಇದೀಗ 404 ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ನೇಮಕಾತಿ ಮರು ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್‌ ಆದೇಶಿಸಿದೆ, ನಾಲ್ಕು ತಿಂಗಳ ಒಳಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpcl.karnataka.gov.in ಭೇಟಿನೀಡಿರಿ.

‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ರೈಲ್ವೆ ನೇಮಕಾತಿ

ರೈಲ್ವೆ 32438 ಗ್ರೂಪ್ ‘ಡಿ’ ಅರ್ಜಿ ಸ್ಥಿತಿ ಲಿಂಕ್ ಪ್ರಕಟ

ಭಾರತೀಯ ರೈಲ್ವೆ ಮಂಡಳಿ, ಬೆಂಗಳೂರು ರೈಲ್ವೆ ಸೇರಿದಂತೆ ದೇಶಾದ್ಯಂತ ಒಟ್ಟು 32438 ಗ್ರೂಪ್ ‘ಡಿ’ ಹುದ್ದೆಗಳ ನೇಮಕಾತಿಗೆ ಜನವರಿ 2025 ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಪರಿಶೀಲಿಸಲು ರೈಲ್ವೆ ಮಂಡಳಿ ಲಿಂಕ್ ಬಿಡುಗಡೆಮಾಡಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.rrbapply.gov.in ಪ್ರವೇಶಿಸಿ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಅಥವಾ ಇಮೇಲ್ ಮತ್ತು ಪಾಸ್‌ವರ್ಡ್ ನಮೂದಿಸಿ ಅರ್ಜಿ ಸ್ವೀಕೃತವಾಗಿರುವುದರ ಕುರಿತು ಖಾತರಿಪಡಿಸಿಕೊಳ್ಳಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್/ಡಿಸೆಂಬರ್ 2025ರಲ್ಲಿ ನಡೆಸಲು ರೈಲ್ವೆ ಮಂಡಳಿ ಸಿದ್ದತೆ ನಡೆಸಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://rrbbnc.gov.in ಅಥವಾ ನಮ್ಮ ವೆಬ್‌ಸೈಟ್ www,karemp.com ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕೆಪಿಎಸ್‌ಸಿ ನೇಮಕಾತಿ

586 ಸಹಾಯಕ ಕೃಷಿ, 86 ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ರದ್ದು

ಕರ್ನಾಟಕ ಲೋಕ ಸೇವಾ ಆಯೋಗ 586 ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳು ಹಾಗೂ 86 ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಮತ್ತು ಈ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾ೦ಕ 27/28 ಸೆಪ್ಟೆಂಬರ್ 2025 ಮತ್ತು 05 ಅಕ್ಟೋಬರ್ 2025ರಂದು ನಡೆಸಲು ನಿಗದಿಪಡಿಸಲಾಗಿತ್ತು ಆದರೆ ಇದೀಗ ದಿನಾ೦ಕ: 28 ಅಕ್ಟೋಬರ್ 2024ರ ನ೦ತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂ೦ಡಳಿ/ಸ್ಟಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸ೦ಬ೦ಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅ೦ತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು . ಸಹ ರದ್ದುಗೊಳಿಸಿ, ಪರಿಶಿಷ್ಟಜಾತಿ ಒಳೆ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕೆ೦ದು ಸೂಚಿಸಲಾಗಿರುವುದರಿಂದ ಆಯೋಗವು 27-09-2025ರಂದು ನಿಗದಿಪಡಿಸಲಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾ೦ಕ 28 ಸೆಪ್ಟೆಂಬರ್ 2025 ಹಾಗೂ 05 ಅಕ್ಟೋಬರ್ 2025ರಂದು ನಿಗದಿಪಡಿಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಆಯ್ಕೆಪಟ್ಟಿ

402 ಸಿವಿಲ್ ಪೊಲೀಸ್ ನೇಮಕಾತಿ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಸಿವಿಲ್ ಪೊಲೀಸ್ ಸಬ್ ಇನ್ನೆಕ್ಟರ್ ಹುದ್ದೆಗಳ ನೇಮಕಾತಿಗೆ 03 ಮಾರ್ಚ್ 2021 ರಲ್ಲಿ ಅಧಿಸೂಚನೆಯನ್ನು ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಹಿಂದೆ ನಡೆಸಲಾಗಿತ್ತು ಇದೀಗ ಈ ಹುದ್ದೆಗಳ ನೇಮಕಾತಿ ಅಂತಿಮ ಆಯ್ಕೆಪಟ್ಟಿಯನ್ನು ಇಲಾಖೆಯು ಪ್ರಕಟಗೊಳಿಸಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://arc21.ksp-recruitment.in ಪ್ರವೇಶಿಸಿ ಆಯ್ಕೆಪಟ್ಟಿಯನ್ನು ನೋಡಬಹುದಾಗಿದೆ, (ಆದರೆ ಈ ಪ್ರಕ್ರಿಯೆ ಹೈಕೋರ್ಟ್/ಸರ್ವೋಚ್ಚ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ವಾದ-ವಿವಾದಗಳ ಅಂತಿಮ ತೀರ್ಪುಗಳಿಗೆ ಒಳಪಟ್ಟಿರುತ್ತದೆ. ಪ್ರಕಟಿತ ಪಟ್ಟಿಗಳು ಇಲಾಖಾ ನಿಯಮಗಳು, ವರ್ಗ ಬದಲಾವಣೆ ಮತ್ತು ಬೃಂದ ಬದಲಾವಣೆಗಳ ಅನ್ವಯ ತಿದ್ದುಪಡಿಗೆ ಒಳಗಾಗಬಹುದಾಗಿಯೂ ತಿಳಿಸಲಾಗಿದೆ) ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://ksp.karnataka.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ 

ಕರ್ನಾಟಕ ಸರ್ಕಾರ ನೇಮಕಾತಿ ಕುರಿತು ಪ್ರಕಟಣೆ ಪ್ರಕಟಿಸಿದೆ

ಒಳ ಮೀಸಲಾತಿ ಜಾರಿ: ಅಕ್ಟೋಬರ್ 28 ನಂತರದ ನೇಮಕಾತಿ ರದ್ದು

ರಾಜ್ಯ ಸರ್ಕಾರವು ಒಳ ಮೀಸಲಾತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, 2024 ಅಕ್ಟೋಬರ್ 28 ನಂತರ ಹೊರಬಂದ ಮತ್ತು ನಿಯಮ ಪಾಲಿಸದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ರದ್ದುಗೊಳಿಸಿದೆ. ಡಿಪಿಎಆರ್ ಸುತ್ತೋಲೆಯಲ್ಲಿ, ಕ್ರೀಡಾಪಟುಗಳಿಗೆ 2% ಮೀಸಲಾತಿಯನ್ನೂ ಸೇರಿಸಿ ಹೊಸ ಅಧಿಸೂಚನೆಗಳನ್ನು ಬೇಗ ಹೊರಡಿಸಿ, ಕಾಲಮಿತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳ ಮನವಿಯ ಹಿನ್ನೆಲೆ, ಕೆಪಿಎಸ್‌ಸಿ ಕೃಷಿ ಇಲಾಖೆಯ 945 ಬಿ ವರ್ಗ ಹುದ್ದೆಗಳ ಪರೀಕ್ಷೆಗಳನ್ನು ಮುಂದೂಡಿದೆ; ಪ್ರವೇಶಪತ್ರಗಳು ಹೊರಬಂದಿದ್ದರೂ ದಿನಾಂಕಗಳನ್ನು ಸ್ಥಗಿತಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿತ ಸಚಿವರನ್ನು ಭೇಟಿ ಮಾಡಿ ಒಳ ಮೀಸಲಾತಿ ಅನ್ವಯವಾಗುವಂತೆ ಮನವಿ ಸಲ್ಲಿಸಿದ್ದನ್ನು ಸರ್ಕಾರ ಪರಿಗಣಿಸಿದೆ. ಒಳ ಮೀಸಲಾತಿ ಸರಿಯಾಗಿ ಅನ್ವಯಿಸಲಾಗದ ಹಿನ್ನೆಲೆ ಪಾರದರ್ಶಕತೆ ಮತ್ತು ಸಾಮಾಜಿಕ ನ್ಯಾಯ ಖಾತ್ರಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೃಷಿ ಇಲಾಖೆಗೆ ಮಾತ್ರವಲ್ಲ, ಇತರ ಇಲಾಖೆಗಳ ಮೇಲೂ ಪರಿಣಾಮ ಬೀರಲಿದೆ; ಹೊಸ ನಿಯಮಗಳಿಗೆ ಅನುಗುಣವಾಗಿ ವೇಳಾಪಟ್ಟಿಗಳು ಪುನರ್‌ ನಿಗದಿಯಾಗಲಿವೆ. ಶೀಘ್ರದಲ್ಲೇ ಹೊಸ ಅಧಿಸೂಚನೆಗಳು ಪ್ರಕಟವಾಗಲಿವೆ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ರೈಲ್ವೆ ನೇಮಕಾತಿ ಮಂಡಳಿ

368 ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸುವುದರ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಿದೆ, ಬೆಂಗಳೂರು ರೈಲ್ವೆ ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 368 ಸೆಕ್ಷನ್ ಕಂಟ್ರೋಲರ್ ಹುದ್ದೆಗಳು, ಅರ್ಜಿ ಸಲ್ಲಿಸಲು ಪದವಿ ಪಡೆದಿರಬೇಕು. ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 20 ರಿಂದ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ(ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ನೀಡಲಾಗುವುದು) ನೇಮಕಾತಿಗೆ ಅಧಿಸೂಚನೆಯನ್ನು15 ಸೆಪ್ಟೆಂಬರ್ 2025ರಂದು ಪ್ರಕಟಿಸಲಾಗುತ್ತದೆ, ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.rrbbnc.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕೆಪಿಎಸ್‌ಸಿ ನೇಮಕಾತಿ

ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಕರ್ನಾಟಕ ಲೋಕಸೇವ ಆಯೋಗ ರಾಜ್ಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ (ಪದವಿಮಟ್ಟದ ಉಳಿಕೆಮೂಲವೃಂದದ) ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ 50 ಹುದ್ದೆಗಳು ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ 10 ಹುದ್ದೆಗಳ ನೇಮಕಾತಿಗೆ ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 13 ಜುಲೈ 2025ರಂದು ನಡೆಸಲಾಗಿತ್ತು ಇದೀಗ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದೆ, ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 20 ಆಗಸ್ಟ್ 2025ರ ಒಳಗೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ www.kpsc.kar.nic.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕೆಪಿಟಿಸಿಎಲ್ ನೇಮಕಾತಿ

ಕಿರಿಯ ಪವರ್ ಮ್ಯಾನ್ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) 2760 ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 2024 ರಲ್ಲಿ ಅರ್ಜಿ ಆಹ್ವಾನಿಸಿ ಅರ್ಹ ಅಭ್ಯಥಿಗಳಿಗೆ ಸಹನಶಕ್ತಿ ಪರೀಕ್ಷೆಯನ್ನು ಮೇ 2025ರಲ್ಲಿ ನಡೆಸಲಾಗಿತ್ತು ಇದೀಗ ಉಳಿಕೆ ಮೂಲ ವೃಂದದ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಮತ್ತು ಕಲ್ಯಾಣ ಕರ್ನಾಟಕ ಜೂನಿಯರ್ ಸ್ಟೇಷನ್ ಅಟೆಂಡೆಂಟ್ (ಕ.ಕ) ಮತ್ತು ಜೂನಿಯರ್ ಪವರ್‌ಮ್ಯಾನ್(ಕ.ಕ) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kptcl.karnataka.gov.in ಪ್ರವೇಶಿಸಿ ಆಯ್ಕೆಪಟ್ಟಿ ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ

ಕೆಪಿಎಸ್‌ಸಿ 78 ಎಸ್‌ಡಿಎ ನೇಮಕಾತಿ ಹೆಚ್ಚುವರಿ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಖಾಲಿ ಇರುವ 575 (494+81 HK) ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 2019ರಲ್ಲಿ ಅರ್ಜಿ ಆಹ್ವಾನಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜೂನ್ 2019ರಲ್ಲಿ ನಡೆಸಿ ಅಂತಿಮ ನೇಮಕಾತಿ ಪಟ್ಟಿಯನ್ನು ಈ ಹಿಂದೆ ಪ್ರಕಟಗೊಳಿಸಿತ್ತು, ಇದೀಗ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ, ಹೈದ್ರಾಬಾದ್ ಕರ್ನಾಟಕ ವೃಂದದ 14 ಹುದ್ದೆಗಳು ಮತ್ತು ಉಳಿಕೆ ಮೂಲ ವೃಂದದ 64 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಪಟ್ಟಿಯನ್ನು ಆಯೋಗವು ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ, ಮತ್ತು ನಿಯಮಾನುಸಾರ 10% ಹೈದ್ರಾಬಾದ್ ಕರ್ನಾಟಕ ವೃಂದದ ಹೆಚ್ಚುವರಿ ಪಟ್ಟಿಯನ್ನೂ ಪ್ರಕಟಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.kpsc.kar.nic.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎

ಕಾಲೇಜು ಶಿಕ್ಷಣ ಇಲಾಖೆ ನೇಮಕಾತಿ

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ಪಡೆದಿರಬೇಕು, ಹುದ್ದೆಗಳ ಸಂಖ್ಯೆಯನ್ನು ನಂತರ ಪ್ರಕಟಿಸಲಾಗುವುದು, ಹೆಚ್ಚುವರಿ ವಿದ್ಯಾರ್ಹತೆ ಮತ್ತು ಅನುಭವ ಇತರ ಮಾಹಿತಿಗೆ ಅಧಿಸೂಚನೆ ಗಮನಿಸಿ, ಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 05 ಆಗಸ್ಟ್ 2025ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಗೆ ಅಧಿಕೃತ ವೆಬ್-ಸೈಟ್ https://dce.karnataka.gov.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎

ಕೆಪಿಎಸ್‌ಸಿ ನೇಮಕಾತಿ

ಕೆಪಿಎಸ್‌ಸಿ ಗ್ರೂಪ್ ‘ಸಿ’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳಾದ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಇಂಜಿನಿಯರ್ 300 ಹುದ್ದೆಗಳು ಮತ್ತು ಸಾರ್ವಜನಿಕ ಗ್ರಂಥಾಲಯದಲ್ಲಿ ಖಾಲಿ ಇರುವ ಸಹಾಯಕ ಗ್ರಂಥಪಾಲಕ 13 ಹುದ್ದೆಗಳಿಗೆ ದಿನಾಂಕ 15 ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಕನ್ನಡ ಭಾಷಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ, ದಿನಾಂಕ 16 ಆಗಸ್ಟ್ 2025ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲು ನಿಗದಿಪಡಿಸಿ ಪ್ರಕಟಣೆ ಪ್ರಕಟಿಸಲಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ https://kpsc.kar.nic.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಸರ್ಕಾರ ವಿವಿಧ ನೇಮಕಾತಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್/ ಗ್ರೂಪ್ ಸಿ/ ಆರ್ ಆರ್ ಬಿ/ ಎಸ್ ಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಿ ಅಭ್ಯರ್ಥಿಗಳ ನಿಯೋಜಿಸುವ ಸಂಬಂಧ ದಿನಾಂಕ 19 ಜುಲೈ 2025 ಪ್ರವೇಶ ಪರೀಕ್ಷೆ ನಡೆಸಿ ಈ ಹಿಂದೆ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಲಾಗಿತ್ತು ಇದೀಗ ಅಂತಿಮ ಕೀ ಉತ್ತರ ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ಕೀ ಉತ್ತರ ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘ ನೇಮಕಾತಿ

35 ಶುಶ್ರೂಷಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಮೈಸೂರು ಜಿಲ್ಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜಿನ ಖಾಲಿ ಇರುವ 35 ಶುಶ್ರೂಷಕರು ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಜಿ.ಎನ್.ಎಂ/ ಬಿ.ಎಸ್.ಸಿ ನರ್ಸಿಂಗ್ ಪದವಿ ಹೊಂದಿರಬೇಕು. ಕರ್ನಾಟಕ ನರ್ಸಿಂಗ್‌ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 29 ಜುಲೈ 2025ರಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಛೇರಿ ಮೈಸೂರು ಜಿಲ್ಲೆ ಇಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://mysore.nic.in ಭೇಟಿ ನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎

ಕೆಪಿಎಸ್‌ಸಿ ನೇಮಕಾತಿ

ಗ್ರೂಪ್ ‘ಸಿ’ ನೇಮಕಾತಿ ಕೀ ಉತ್ತರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ ಉಳಿಕೆ ಮೂಲ ವೃಂದದ 313 ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 2025ರಲ್ಲಿ ನಡೆಸಿ ತಾತ್ಕಾಲಿಕ ಕೀ ಉತ್ತರನ್ನು ಈ ಹಿಂದೆ ಪ್ರಕಟಿಸಲಾಗಿತ್ತು ಇದೀಗ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರವನ್ನು ಆಯೋಗವು ಪ್ರಕಟಿಸಿದೆ ಮತ್ತು ಕರ್ನಾಟಕ ಲೋಕ ಸೇವಾ ಆಯೋಗ ಉಳಿಕೆ ಮೂಲ ವೃಂದದ 70 ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೇ 2025ರಲ್ಲಿ ನಡೆಸಿ ತಾತ್ಕಾಲಿಕ ಕೀ ಉತ್ತರನ್ನು ಈ ಹಿಂದೆ ಪ್ರಕಟಿಸಲಾಗಿತ್ತು ಇದೀಗ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರವನ್ನು ಆಯೋಗವು ಪ್ರಕಟಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎

ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ

434 ಹುದ್ದೆಗಳ ನೇಮಕಾತಿ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ರೈಲ್ವೆ ಪ್ಯಾರಾಮೆಡಿಕಲ್ 434 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸುವುದರ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಿದೆ, ಬೆಂಗಳೂರು ರೈಲ್ವೆ ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ನರ್ಸಿಂಗ್ ಹುದ್ದೆಗಳು, ಸೂಪರಿಂಟೆಂಡೆಂಟ್ ಹುದ್ದೆಗಳು, ಡಯಾಲಿಸಿಸ್ ತಂತ್ರಜ್ಞ ಹುದ್ದೆಗಳು, ಆರೋಗ್ಯ ಮತ್ತು ಮಲೇರಿಯಾ ಇನ್ಸ್‌ಪೆಕ್ಟರ್ ಹುದ್ದೆಗಳು, ಔಷಧಿಕಾರ ಹುದ್ದೆಗಳು, ರೇಡಿಯೋಗ್ರಾಫರ್ ಎಕ್ಸ್-ರೇ ತಂತ್ರಜ್ಞ ಹುದ್ದೆಗಳು, ಇಸಿಜಿ ತಂತ್ರಜ್ಞ ಹುದ್ದೆಗಳು, ಲಾಬ್ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು 09 ಆಗಸ್ಟ್ 2025ರಂದು ಪ್ರಕಟಿಸಲಾಗುತ್ತದೆ, ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಜಿಎನ್‌ಎಂ/ಬಿ.ಎಸ್‌ಸಿ ನರ್ಸಿಂಗ್/ ಪದವಿ / ಫಾರ್ಮಸಿಯಲ್ಲಿ ಡಿಪ್ಲೊಮಾ/ ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ /ರಸಾಯನಶಾಸ್ತ್ರದಲ್ಲಿ ಬಿ.ಎಸ್ಸಿ/ ಡಿಎಂಎಲ್ಟಿ / ಬಿ.ಎಸ್ಸಿ ಮತ್ತು ಹಿಮೋಡಯಾಲಿಸಿಸ್‌ನಲ್ಲಿ ಡಿಪ್ಲೊಮಾ/ ಸಂಬಂಧಿತ ವಿಭಾಗದಲ್ಲಿ ಪದವಿ / ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು, ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.rrbbnc.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎‎‎‎‎‎ ‎‎

ಕಂದಾಯ ಆಯುಕ್ತಾಲಯ ನೇಮಕಾತಿ

ಲಾ ಕ್ಲರ್ಕ್/ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಂದಾಯ ಆಯುಕ್ತಾಲಯ ಕಾನೂನು ಕೋಶ ವಿಭಾಗಕ್ಕೆ 04 ಲಾ ಕ್ಲರ್ಕ್/ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ಒಪ್ಪಂದದ ಆಧಾರದಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಲಾ ಇಂಟರ್ನ್ ಅಥವಾ ಕಾನೂನು ಪದವಿ ಪಡೆದಿರಬೇಕು, ಮಾಸಿಕ ವೇತನ 20000 ರೂ ನೀಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಕಂದಾಯ ಆಯುಕ್ತಾಲಯ ಕಾರ್ಯಾಲಯಕ್ಕೆ ದಿನಾಂಕ 31 ಜುಲೈ 2025ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ: 080-22032691 ಸಂಪರ್ಕಿಸಿ ಅಥವಾ ಕಂದಾಯ ಆಯುಕ್ತಾಲಯ 711, 7ನೇ ಮಹಡಿ, 2ನೇ ಗೇಟ್, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು 560001 ಕಛೇರಿ ಬೇಟಿ ನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎

ಕೆಪಿಟಿಸಿಎಲ್ ನೇಮಕಾತಿ

ಕಿರಿಯ ಪವರ್ ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) 2760 ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 2024 ರಲ್ಲಿ ಅರ್ಜಿ ಆಹ್ವಾನಿಸಿ ಅರ್ಹ ಅಭ್ಯಥಿಗಳಿಗೆ ಸಹನಶಕ್ತಿ ಪರೀಕ್ಷೆಯನ್ನು ಮೇ 2025ರಲ್ಲಿ ನಡೆಸಲಾಗಿತ್ತು ಇದೀಗ ಕಲ್ಯಾಣ ಕರ್ನಾಟಕ ಜೂನಿಯರ್ ಸ್ಟೇಷನ್ ಅಟೆಂಡೆಂಟ್ (ಕ.ಕ) ಮತ್ತು ಜೂನಿಯರ್ ಪವರ್‌ಮ್ಯಾನ್(ಕ.ಕ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kptcl.karnataka.gov.in ಬೇಟಿನೀಡಿರಿ ಆಯ್ಕೆಪಟ್ಟಿ ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎

ಕೆಪಿಎಸ್‌ಸಿ ನೇಮಕಾತಿ

ಗ್ರೂಪ್ ಬಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಪ್ರವೇಶ ಪತ್ರ

ಕರ್ನಾಟಕ ಲೋಕಸೇವ ಆಯೋಗ ರಾಜ್ಯದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳಾದ ಭೂ ವಿಜ್ಞಾನಿ ಹುದ್ದೆಗಳು, ಸಹಾಯಕ ನಿರ್ದೇಶಕರು ಹುದ್ದೆಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆಗಳು, ಸಹಾಯಕ ಇಂಜಿನಿಯರ್, ಕಾರ್ಖಾನೆ ನಿರ್ದೇಶಕರು, ಕಲ್ಯಾಣಾಧಿಕಾರಿಗಳು ಹುದ್ದೆಗಳು ಸೇರಿದಂತೆ ಒಟ್ಟು 50 ಹೈದರಾಬಾದ್ ಕರ್ನಾಟಕ ವೃಂದ ಹುದ್ದೆಗಳ ನೇಮಕಾತಿಗೆ ಏಪ್ರಿಲ್ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು  ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 26 ಜುಲೈ 2025ರಂದು ನಡೆಸಲು ನಿಗದಿಪಡಿಸಿ ಪ್ರವೇಶಪತ್ರವನ್ನು ಬಿಡುಗಡೆಮಾಡಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kpsc.kar.nic.in ಪ್ರವೇಶಿಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎

ಕೆಪಿಎಸ್‌ಸಿ ನೇಮಕಾತಿ

ಗ್ರೂಪ್ ಸಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಪ್ರವೇಶ ಪತ್ರ

ಕರ್ನಾಟಕ ಲೋಕಸೇವ ಆಯೋಗ ರಾಜ್ಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ 50 ಹುದ್ದೆಗಳು ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ 10 ಹುದ್ದೆಗಳ ನೇಮಕಾತಿಗೆ ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆ ಪ್ರವೇಶ ಪತ್ರವನ್ನು ಪ್ರಕಟಿಸಿದೆ, 12, 13 ಜುಲೈ 2025ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿಗದಿಪಡಿಸಿ ಪರೀಕ್ಷೇಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ, ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್‌ https://www.kpsc.kar.nic.in ಭೇಟಿ ನೀಡಿ ಅಪ್ಲಿಕೇಶನ್ ಐಡಿ ಮತ್ತು ಜನ್ಮದಿನಾಂಕ ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದಾಗಿದೆ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ www.kpsc.kar.nic.in ಬೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ

ಗ್ರಾಮ ಒನ್ ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದ್ದು, ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಸ್ವಂತ ಗ್ರಾಮದಲ್ಲಿ ತಲುಪಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ, ಪ್ರಸ್ತುತ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕಲಬುರಗಿ, ಕೊಡಗು, ಮಂಡ್ಯ, ಮೈಸೂರು, ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಡಿಪ್ಲೊಮಾ/ಐಟಿಐ/ಪಿಯುಸಿ II/ಪದವೀಧರರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕನ್ನಡ, ಇಂಗ್ಲಿಷ್ ಎರಡರಲ್ಲೂ ಟೈಪಿಂಗ್ ಮಾಡಲು ಪರಿಣತಿ ಹೊಂದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ದಿನಾಂಕ 15 ಜುಲೈ 2025ರ ಒಳಗೆ ಅರ್ಜಿ ಸಲ್ಲಿಸಬೇಕು, ಜಿಲ್ಲೆಯ ಯಾವ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಯಲು ವೆಬ್‌ಸೈಟ್ https://kal-mys.gramaone.karnataka.gov.in ಭೇಟಿನೀಡಿ ಜಿಲ್ಲೆ-ತಾಲೂಕು-ಗ್ರಾಮ ಆಯ್ಕೆ ಮಾಡಿ ಮಾಹಿತಿ ತಿಳಿಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kal-mys.gramaone.karnataka.gov.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎  ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ 

ಕೆಪಿಎಸ್‌ಸಿ ನೇಮಕಾತಿ

386 ಭೂಮಾಪಕರ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ತಡೆ

ಕರ್ನಾಟಕ ಲೋಕ ಸೇವಾ ಆಯೋಗ, ಭೂಮಾಪನ ಕಂದಾಯ ವ್ಯವಸ್ಥೆ ಭೂದಾಖಲೆಗಳ ಇಲಾಖೆಯಲ್ಲಿನ “ಭೂಮಾಪಕರ ಹುದ್ದೆಗಳ” ಉಳಿಕೆ ಮೂಲ ವೃಂದದ 296 ಮತ್ತು ಹೈದ್ರಾಬಾದ್ ಸ್ಥಳೀಯ ವೃಂದದ 90 ಹುದ್ದೆಗಳ ನೇಮಕಾತಿಗೆ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಆದರೆ ಇದೀಗ ಸರ್ಕಾರದ ಸುತ್ತೋಲೆಯನ್ವಯ ದಿನಾಂಕ 25 ನವೆಂಬರ್ 2024ರ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಿದ್ದು, ಸದರಿ ಸೂಚನೆಗಳು 28 ಅಕ್ಟೋಬರ್ 2024 ರಿಂದ ಅನ್ವಯವಾಗುವುದಾಗಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸದರಿ ನೇಮಕಾತಿ ಕುರಿತಾದ ಕಾರ್ಯಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತ” ಎಂದು ನಿರ್ಣಯಿಸಲಾಗಿರುತ್ತದೆ, ಈ ಕುರಿತು ಅಧಿಕೃತ ಪ್ರಕಟಣೆಯನ್ನು ಕೆಪಿಎಸ್‌ಸಿ ಪ್ರಕಟಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎

ಕೆಪಿಎಸ್‌ಸಿ ನೇಮಕಾತಿ

384 ಕೆಎಎಸ್‌ ಹುದ್ದೆಗಳ ನೇಮಕಾತಿ ಅಧಿಸೂಚನೆ ರದ್ದು

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿಗೆ ಮಾರ್ಚ್ 2024ರಲ್ಲಿ ಅರ್ಜಿ ಆಹ್ವಾನಿಸಿ ಡಿಸೆಂಬರ್ 2024ರಲ್ಲಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಿ ಅರ್ಹ ಅಭ್ಯರ್ಥಿಗಳಿಗೆ ಮೇ 2025ರಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು ಆದರೆ ಇದೀಗ ಸರಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರಕಾರದ ಆದೇಶದ ಆಧಾರದ ಮೇಲೆ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ರದ್ದುಪಡಿಸಿದೆ, ಸರಕಾರ ಈಗ ನೇಮಕ ಪ್ರಕ್ರಿಯೆ ಊರ್ಜಿತಗೊಳಿಸಬೇಕಾದರೆ ಕೆಎಟಿ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://kpsc.kar.nic.in ಭೇಟಿನೀಡಿರಿ.

‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎  ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎

‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎

ಕನಾ೯ಟಕ ಲೋಕಸೇವಾ ಆಯೋಗ

ಕೆಪಿಎಸ್‌ಸಿ 2025ರ ನೇಮಕಾತಿ ಪರೀಕ್ಷೆ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2024ರಲ್ಲಿ ಗ್ರೂಪ್-ಎ, ಗ್ರೂಪ್-ಬಿ ಮತ್ತು ಗ್ರೂಪ್-ಸಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಈ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.kpsc.kar.nic.in ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ಪರೀಕ್ಷಾ ದಿನಾಂಕ, ಸಮಯ, ಹುದ್ದೆಯ ಹೆಸರು ಮತ್ತು ನೇಮಕಾತಿ ಇಲಾಖೆ ಇತರ ಮಾಹಿತಿಯನ್ನು ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.kpsc.kar.nic.in ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎‎‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎

ಕೆಇಎ ನೇಮಕಾತಿ

2025ರಲ್ಲಿ ರಾಜ್ಯ ಸರ್ಕಾರದ ನೇಮಕಾತಿಗಳು

ಕರ್ನಾಟಕ ರಾಜ್ಯ ಸರ್ಕಾರ 2025ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ರದ ಮೂಲಕ ನಡೆಸಲಾಗುವ ನೇಮಕಾತಿ ವಿವರವನ್ನು ಪ್ರಕಟಿಸಿದೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಬಿಇ, ಬಿಟೆಕ್ ಎಂಬಿಎ ಸೇರಿದಂತೆ ಇತರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮುಂಬರಲಿರುವ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ, 747 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ಅನುಮತಿ ಪಡೆಯುತ್ತಿದ್ದಂತೆ ಅರ್ಜಿ ಆಹ್ವಾನಿಸಲಾಗುತ್ತದೆ, ಹುದ್ದೆಯ ಹೆಸರು, ಇಲಾಖೆ, ಹುದ್ದೆಗಳ ಸಂಖ್ಯೆ ಇತರ ವಿವರವನ್ನು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎

ಕಂದಾಯ ಇಲಾಖೆ ನೇಮಕಾತಿ

1000 ಗ್ರಾಮ ಆಡಳಿತ ಅಧಿಕಾರಿ ಅಂತಿಮ ಅಂಕ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಏಪ್ರಿಲ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು 27 ಅಕ್ಟೋಬರ್ 2024ರಂದು ನಡೆಸಲಾಗಿತ್ತು ಇದೀಗ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 35% ರಷ್ಟು ಅಂಕಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ, ಅಂತಿಮ ಅಂಕಪಟ್ಟಿಯಲ್ಲಿ ಗಳಿಸಿದ ಅಂಕಗಳು ಮತ್ತು ಮೀಸಲಾತಿ ನಿಯಮಾನುಸಾರ ಖಾಲಿ ಇರುವ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎ ‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎

ಕಂದಾಯ ಇಲಾಖೆ ನೇಮಕಾತಿ

1000 ಗ್ರಾಮ ಆಡಳಿತ ಅಧಿಕಾರಿ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಏಪ್ರಿಲ್ 2024ರಲ್ಲಿ ಅರ್ಜಿ ಆಹ್ವಾನಿಸಿ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು 27 ಅಕ್ಟೋಬರ್ 2024ರಂದು ನಡೆಸಲಾಗಿತ್ತು ಇದೀಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ, ಆಕ್ಷೇಪಣೆಗಳು ಇದ್ದರೆ 28 ನವೆಂಬರ್ 2024ರ ಒಳಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ https://cetonline.karnataka.gov.in/kea ಅರ್ಜಿ ಸಂಖ್ಯೆ ನಮೂದಿಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ವಿವರವನ್ನು ನೋಡಬಹುದಾಗಿದೆ, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಭೇಟಿನೀಡಿರಿ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

ಅಂತಿಮ ಕೀ ಉತ್ತರ : ಕ್ಲಿಕ್ಕಿಸಿ

‎‎ ‎‎‎‎‎ ‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎‎‎‎‎ ‎‎ ‎‎‎‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎ ‎‎‎ ‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎‎ ‎‎ ‎‎‎‎‎ ‎‎‎ ‎‎ ‎‎‎ ‎‎ ‎‎‎‎‎‎ ‎‎ ‎‎‎ ‎‎ ‎‎‎ ‎‎ ‎‎‎‎‎‎‎ ‎ ‎‎‎ ‎‎ ‎‎‎ ‎‎ ‎‎‎ ‎‎ ‎‎‎‎‎ ‎‎‎

‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎‎ ‎‎‎‎ ‎‎‎‎ ‎‎‎‎ ‎‎‎‎‎ ‎‎‎‎ ‎‎‎‎ ‎‎‎‎ ‎‎‎‎‎ ‎‎‎‎ ‎‎‎‎ ‎‎‎‎‎ ‎‎‎‎ ‎‎‎‎ ‎‎‎‎‎ ‎‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎ ‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎‎ ‎‎‎ ‎‎‎ ‎‎ ‎‎‎ ‎

ಕರ್ನಾಟಕ ಅಂಚೆ ವೃತ್ತ

1940 ಜಿಡಿಎಸ್ ಹುದ್ದೆಗಳ ಫಲಿತಾಂಶ

ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ 1940 ಗ್ರಾಮೀಣ್ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿ ಬಿಡುಗಡೆ ಮಾಡಿದೆ, ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://indiapostgdsonline.gov.in ಪ್ರವೇಶಿಸಿ ಅಥವಾ ಕೆಳಗಿನ ಲಿಂಕ್ ಕ್ಲಿಕ್ಕಿಸಿ ದಾಖಲೆ ಪರಿಶೀಲನೆಗೆ ಅರ್ಹತಾ ಪಟ್ಟಿ, ಅಭ್ಯರ್ಥಿಗಳ ಹೆಸರು, ಹುದ್ದೆಯ ಹೆಸರು ಇತರ ವಿವರ ನೋಡಬಹುದಾಗಿದೆ.

ಹೆಚ್ಚಿನ ಮಾಹಿತಿಗೆ : ಕ್ಲಿಕ್ಕಿಸಿ

‎‎‎ ‎‎ ‎‎‎ ‎‎
.
.

.

error: Content is protected !!